
ಪ್ರಜಾವಾಣಿ ವಾರ್ತೆ
ನವದೆಹಲಿ (ಏಜೆನ್ಸೀಸ್): ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ನಾಗರಿಕ ಸೇವಾ ಪರೀಕ್ಷೆಗಳ ಅಭ್ಯರ್ಥಿಗಳ ವಯೋಮಿತಿ ಕಡಿತಗೊಳಿಸುವ ಬಗ್ಗೆ ಬಿ.ಎಸ್. ಬಸ್ವಾನ್ ನೇತೃತ್ವದ ತಜ್ಞರ ಸಮಿತಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಯುಪಿಎಸ್ಸಿಗೆ ಮಂಗಳವಾರ ವರದಿ ಸಲ್ಲಿಸಲಾಗಿದೆ. ಆಯೋಗ ಮೊದಲು ಈ ವರದಿಯನ್ನು ಪರಿಶೀಲಿಸಲಿದೆ. ಆಯೋಗದ ತಜ್ಞರ ಅಭಿಪ್ರಾಯ ಪಡೆದು ಬಳಿಕ ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳ ಅಭ್ಯರ್ಥಿಗಳ ವಯೋಮಿತಿ ಕಡಿತದ ವಿಚಾರ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.