ADVERTISEMENT

ಯುವಕನಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 4 ಜನವರಿ 2012, 19:30 IST
Last Updated 4 ಜನವರಿ 2012, 19:30 IST

ಆಗ್ರಾ (ಪಿಟಿಐ): ಉಚಿತವಾಗಿ ದಿನಪತ್ರಿಕೆ ನೀಡಲು ಒಪ್ಪದ ಯುವಕನ ಮೇಲೆ ಬಿಜೆಪಿ ಮುಖಂಡರ ಪುತ್ರನೊಬ್ಬ ಗುಂಡು ಹಾರಿಸಿರುವ ಘಟನೆ ಬೆಳಕಿಗೆ ಬಂದಿದೆ.

`ಬಿಜೆಪಿ ಮುಖಂಡ ರಾಣಾ ಪ್ರತಾಪ್ ಅವರ ಪುತ್ರ ವಿಕಾಸ್ ಮತ್ತು ಆತನ ಗೆಳೆಯ ಅಜಿತ್, 22 ವರ್ಷದ ರಾಮ್ ಕುಮಾರ್‌ಗೆ ಮನಬಂದಂತೆ ಥಳಿಸಿದ್ದಾರೆ. ಅನಂತರ ಯುವಕನ ಎದೆಗೆ ಗುಂಡು ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರಾಮ್‌ಗೆ ಇಲ್ಲಿನ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪರಿಸ್ಥಿತಿ ಚಿಂತಾಜನಕವಾಗಿದೆ~ ಎಂದು ಪೊಲೀಸರು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.