ಹೊಸಪೇಟೆ: ಇಲ್ಲಿನ ಗೃಹರಕ್ಷಕ ದಳದ ಕಚೇರಿಯಲ್ಲಿ ಯುವ ಬ್ರಿಗೇಡ್ನಿಂದ ಉಪನ್ಯಾಸ ಏರ್ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹರಕ್ಷಕ ದಳದ ಘಟಕಾಧಿಕಾರಿ ಎಸ್.ಎಂ. ಗಿರೀಶ್ ಅವರನ್ನು ಬೆಂಗಳೂರಿನ ಮಹಾ ಸಮಾದೇಷ್ಟರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ.
ಇಲಾಖೆಯ ಹಿರಿಯ ಅಧಿಕಾರಿಗಳ ಅನುಮತಿಯಿಲ್ಲದೇ ಉಪನ್ಯಾಸ ಏರ್ಪಡಿಸಿರುವುದಕ್ಕೆ ಈ ಕ್ರಮ ಜರುಗಿಸಲಾಗಿದೆ. ಮುಂದಿನ ಆದೇಶದ ವರೆಗೆ ಅಮಾನತು ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.