ADVERTISEMENT

ಯೆಚೂರಿ ವಿರುದ್ಧ ಯೋಗ ಗುರು ದೂರು

​ಪ್ರಜಾವಾಣಿ ವಾರ್ತೆ
Published 4 ಮೇ 2019, 20:15 IST
Last Updated 4 ಮೇ 2019, 20:15 IST
   

ಡೆಹ್ರಾಡೂನ್: ‘ಹಿಂದೂ ಧರ್ಮದಲ್ಲೇ ಹಿಂಸೆ ಇದೆ’ ಎಂಬ ಹೇಳಿಕೆ ನೀಡಿರುವ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ವಿರುದ್ಧ ಯೋಗಗುರು ರಾಮ್‌ದೇವ್‌ ಅವರು ದೂರು ನೀಡಿದ್ದಾರೆ.

‘ಯೆಚೂರಿ ಅವರು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ರಾಮ್‌ದೇವ್‌ ದೂರಿನಲ್ಲಿ ಒತ್ತಾಯಿಸಿದ್ದಾರೆ. ಆ ಬಗ್ಗೆ ಎಫ್‌ಐಆರ್‌ ದಾಖಲಿಸಲಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗೆ ಸೂಚಿಸಲಾಗಿದೆ’ ಎಂದು ಹರಿದ್ವಾರದ ಎಸ್‌ಎಸ್‌ಪಿ ಜನಮೇಜಯ ಖಂಡೂರಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರ ಹೇಳಿಕೆಗಳನ್ನು ಉಲ್ಲೇಖಿಸಿದ್ದ ಯೆಚೂರಿ, ‘ರಾಮಾಯಣ, ಮಹಾಭಾರತ ಗ್ರಂಥಗಳಲ್ಲಿ ಹಿಂಸೆಯಿದೆ. ಹೀಗಿರುವಾಗ ಹಿಂದೂಗಳಿಗೆ ಹಿಂಸೆಯಲ್ಲಿ ವಿಶ್ವಾಸವಿಲ್ಲ ಎನ್ನಲು ಹೇಗೆ ಸಾಧ್ಯ’ ಎಂದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.