ನವದೆಹಲಿ (ಐಎಎನ್ಎಸ್): ಯೆಮನ್ನಲ್ಲಿ ಆಡಳಿತಾರೂಢ ಸರ್ಕಾರ ಹಾಗೂ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಅಲ್ಲಿ ನೆಲೆಸಿರುವ ಭಾರತೀಯರು ಕೂಡಲೇ ರಾಯಭಾರ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಸಂಕಷ್ಟದಲ್ಲಿರುವವರಿಗಾಗಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಮತ್ತು ಭಾರತೀಯರು ಸದ್ಯದ ಪರಿಸ್ಥಿತಿಯಲ್ಲಿ ಅಲ್ಲಿಂದ ದೇಶಕ್ಕೆ ವಾಪಸು ಮರಳುವುದೇ ಸೂಕ್ತ ಎಂದು ವಿದೇಶಾಂಗ ವ್ಯವಹಾರ ಇಲಾಖೆ ಮಂಗಳವಾರ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.