ಸಿಲಿಗುರಿ, ಅಹಮದಾಬಾದ್, ತಿರುವನಂತಪುರ: ದೇಶದೆಲ್ಲೆಡೆ ರಂಜಾನ್ ಆಚರಣೆ ಸಂಭ್ರಮ ಮನೆಮಾಡಿದ್ದು, ಗಡಿಯಲ್ಲಿ ಯೋಧರು ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ.
ಸಿಲಿಗುರಿಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್ಎಫ್) ಮತ್ತು ಬಾಂಗ್ಲಾದೇಶ ಗಡಿ ರಕ್ಷಣಾ ಪಡೆ(ಬಿಬಿಜಿ) ಯೋಧರು ಶುಕ್ರವಾರ ಸಿಹಿ ವಿನಿಯಮ ಮಾಡಿಕೊಂಡಿದ್ದಾರೆ.
ಇತ್ತ ದೇಶದಲ್ಲಿ ಮುಸ್ಲಿಂ ಸಮಾಜದ ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.
ಕೇರಳದ ತಿರುವನಂತಪುರದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದು, ಸಂಸದ ಶಶಿತರೂರ್ ಅವರೂ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.