ನವದೆಹಲಿ: ಸೇನಾ ಸಿಬ್ಬಂದಿಗೆ ತರಬೇತಿ ನೀಡುವ ಪ್ರತಿಷ್ಠಿತ ರಕ್ಷಣಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಓಂಪ್ರಕಾಶ್ ಶುಕ್ಲಾ, ನಾಲ್ವರು ಸಿಬ್ಬಂದಿ ಹಾಗೂ ಇತರರ ವಿರುದ್ಧ ಸಿಬಿಐ ಗುರುವಾರ ಪ್ರಕರಣ ದಾಖಲಿಸಿದೆ.
ವಂಚನೆ, ಸಂಚು ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಸಿಬಿಐ, ಆರೋಪಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಶೋಧ ನಡೆಸಿದೆ.
ಪುಣೆಯ ಖಡಕ್ವಾಸ್ಲಾದಲ್ಲಿರುವ ತರಬೇತಿ ಕೇಂದ್ರಕ್ಕೆ 2011ರಲ್ಲಿ ಶುಕ್ಲಾ ನೇಮಕಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.