
ಪ್ರಜಾವಾಣಿ ವಾರ್ತೆಕೊಲ್ಕತ್ತಾ, (ಐಎಎನ್ಎಸ್): ಮದುವೆ ಸಮಾರಂಭಕ್ಕೆ ಪ್ರಯಾಣಿಕರನ್ನು ಹೊತ್ತು ತೆರುಳುತ್ತಿದ್ದ ಬಸ್ಸು ಶನಿವಾರ ಇಲ್ಲಿನ ಬುರುದ್ವಾನ್ ಜಿಲ್ಲೆಯಲ್ಲಿ ರಸ್ತೆ ಅಪಘಾತಕ್ಕೆ ತುತ್ತಾಗಿದೆ. ಘಟನೆಯಿಂದ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 16 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿರುವ ಪಡೆಯುವ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಬಸ್ಸು ಉರುಳಿದೆ ಆಗ ಈ ದುರ್ಘಟನೆ ಜರುಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.