ADVERTISEMENT

ರಾಜಸ್ತಾನ ಹತ್ಯೆ ಪ್ರಕರಣ: ಉದಯ್‌ಪುರದಲ್ಲಿ 144 ಸೆಕ್ಷನ್‌ ಜಾರಿ

ಏಜೆನ್ಸೀಸ್
Published 14 ಡಿಸೆಂಬರ್ 2017, 13:52 IST
Last Updated 14 ಡಿಸೆಂಬರ್ 2017, 13:52 IST
ರಾಜಸ್ತಾನ ಹತ್ಯೆ ಪ್ರಕರಣ: ಉದಯ್‌ಪುರದಲ್ಲಿ 144 ಸೆಕ್ಷನ್‌ ಜಾರಿ
ರಾಜಸ್ತಾನ ಹತ್ಯೆ ಪ್ರಕರಣ: ಉದಯ್‌ಪುರದಲ್ಲಿ 144 ಸೆಕ್ಷನ್‌ ಜಾರಿ   

ಉದಯ್‌ಪುರ: ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊ ರಾಜಸ್ತಾನದಲ್ಲಿ ಕೋಮುಗಲಭೆಯ ಆತಂಕ ಸೃಷ್ಟಿಸಿದೆ. ಮುನ್ನೆಚ್ಚೆರಿಕೆ ವಹಿಸಿರುವ ಪೊಲೀಸರು ನಗರದಲ್ಲಿ 144 ಸೆಕ್ಷನ್‌ ಜಾರಿ ಮಾಡಿ ಆದೇಶ ಹೊರಡಿಸಿದೆ.

ಕೊಲೆ ಪ್ರಕರಣಕ್ಕೆ ‘ಲವ್‌ ಜಿಹಾದ್‌’ ಕಾರಣ ಎನ್ನಲಾಗಿರುವುದರಿಂದ ಕೋಮುಗಲಭೆಯ ಭೀತಿ ಮೂಡಿದ್ದು, ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿರ್ಬಂಧಿಸಲಾಗಿದೆ. ಕೋಮುಭಾವನೆ ಕೆರಳಿಸುವಂತಹ ಸಂದೇಶಗಳನ್ನು ಹರಿಬಿಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ವಿಡಿಯೊ ಹಂಚಿಕೆಯಾಗುವುದನ್ನು ತಪ್ಪಿಸಲು ಉದಯ್‌ಪುರ ಜಿಲ್ಲೆ ವ್ಯಾಪ್ತಿಯಲ್ಲಿ ಅಂತರ್ಜಾಲ ಸೇವೆಯನ್ನು ನಿರ್ಬಂಧಿಸಲಾಗಿದೆ. ಬುಧವಾರ ರಾತ್ರಿ 8 ಗಂಟೆಯಿಂದ ಗುರುವಾರ ರಾತ್ರಿ 8ರ ವರೆಗೆ (24 ಗಂಟೆ ಕಾಲ) ಅಂತರ್ಜಾಲ ಸೇವೆ ಸ್ಥಗಿತಗೊಂಡಿರಲಿದೆ ಎಂದು ವಿಭಾಗೀಯ ಆಯುಕ್ತ ಭವಾನಿ ಸಿಂಗ್‌ ದೆಥಾ ಹೇಳಿದ್ದಾರೆ.

ADVERTISEMENT

ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೊ ಸ್ಥಳೀಯರಿಗೆ ತಲುಪದಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ, ಶಂಭುನಾಥ್ ರಾಯ್‌ಘರ್‌ ಎಂಬಾತ ಮೊಹಮ್ಮದ್ ಅಫ್ರಾಜುಲ್ ಎಂಬುವವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಜೀವಂತವಾಗಿ ಸುಟ್ಟು ಹಾಕಿರುವುದು ಸೆರೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.