
ಪ್ರಜಾವಾಣಿ ವಾರ್ತೆಇಟಾನಗರ (ಪಿಟಿಐ): ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗ. ಈ ವಿಷಯದ ಬಗ್ಗೆ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಗುರುವಾರ ಸ್ಪಷ್ಟಪಡಿಸಿದರು.
ಇಲ್ಲಿಗೆ ಸಮೀಪದ ನಾಹರ್ಲಗನ್ನಲ್ಲಿ ತಮ್ಮ ಯಾತ್ರೆ ಪ್ರಯುಕ್ತ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಈ ಭೂಪ್ರದೇಶದ ಬಗ್ಗೆ ಚೀನಾ ಹೇಳಿಕೆ ನೀಡಿದ್ದರು ಕೂಡ ಈ ವಿಷಯದಲ್ಲಿ ಪಕ್ಷ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಚೀನಾ ಅಧ್ಯಕ್ಷ ಹೂ ಜಿಂಟಾವೊ ನವದೆಹಲಿಗೆ ಭೇಟಿ ನೀಡಿದ್ದಾಗ ಅವರಿಗೆ ಮನವರಿಕೆ ಮಾಡಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.