ನವದೆಹಲಿ (ಪಿಟಿಐ): ಬೇನಾಮಿ ಕಂಪೆನಿಗಳ ಹೆಸರಿನಲ್ಲಿ ಹಣ ಹೂಡಿಕೆ ನಡೆಸಿದ ಆರೋಪದ ಮೇಲೆ ರಾಜೀನಾಮೆ ನೀಡಬೇಕು ಎಂಬ ಪಕ್ಷದ ಕೆಲವು ಮುಖಂಡರ ಬೇಡಿಕೆಯನ್ನು ತಳ್ಳಿಹಾಕಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ, ತಾನೊಬ್ಬ `ಪ್ರಾಮಾಣಿಕ ವ್ಯಕ್ತಿ' ಎಂದು ಸ್ಪಷ್ಟಪಡಿಸಿದ್ದಾರೆ.
ಟಿವಿ ಟುಡೆ ಆಯೋಜಿಸಿದ್ದ 2 ದಿನಗಳ `ಅಜೆಂಡಾ ಆಜ್ ತಕ್' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದರು. ತಮ್ಮ ಮೇಲಿನ ಆರೋಪಗಳು ಯುಪಿಎ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪಕ್ಷ ನಡೆಸುತ್ತಿರುವ ಹೋರಾಟಕ್ಕೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಗಡ್ಕರಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮುಖಂಡರಾದ ರಾಮ್ ಜೇಠ್ಮಲಾನಿ ಮತ್ತು ಯಶವಂತ ಸಿನ್ಹಾ ಆಗ್ರಹಿಸಿದ್ದರು.
`ತಾನೊಬ್ಬ ಉದ್ದಿಮೆದಾರನಲ್ಲ, ಆದರೆ ಸಾಮಾಜಿಕ ಕಾಳಜಿಯ ಉದ್ಯಮಿಯಾಗಿದ್ದು, ತಮ್ಮ ವಿರುದ್ಧದ ಆರೋಪಗಳಾವುವೂ ಸಾಬೀತಾಗಿಲ್ಲ' ಎಂದು ಗಡ್ಕರಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.