ನವದೆಹಲಿ: ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿರುವ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ.
ಕೇಂದ್ರದ ಎಂಟು ಜನ ಸಚಿವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ನಿಟ್ಟಿನಲ್ಲಿ ವಿವಿಧ ರಾಜ್ಯಗಳಿಂದ ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿ ಉತ್ತರ ಪ್ರದೇಶದಿಂದ, ಸಚಿವರಾದ ಧರ್ಮೇಂದ್ರ ಪ್ರಧಾನ್ ಹಾಗೂ ತಾವರ್ಚಂದ್ ಗೆಹ್ಲೋಟ್ ಮಧ್ಯಪ್ರದೇಶದಿಂದ ಸ್ಪರ್ಧಿಸಲಿದ್ದಾರೆ.
ಗುಜರಾತ್ನಿಂದ ಮನಸುಖ್ ಮಾಂಡವಿಯಾ, ಪುರುಷೋತ್ತಮ ರೂಪಲಾ, ಹಿಮಾಚಲ ಪ್ರದೇಶದಿಂದ ಜೆ.ಪಿ.ನಡ್ಡಾ, ಬಿಹಾರದಿಂದ ರವಿಶಂಕರ ಪ್ರಸಾದ್, ರಾಜಸ್ಥಾನದಿಂದ ಭೂಪಿಂದರ್ ಯಾದವ್ ಅವರು ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.