ನವದೆಹಲಿ (ಪಿಟಿಐ): ರಾತ್ರಿ ಸಮಯದಲ್ಲಿ ಪೆಟ್ರೋಲ್ ಪಂಪ್ಗಳನ್ನು ಮುಚ್ಚುವ ಯಾವುದೇ ಪ್ರಸ್ತಾವನೆಗಳು ಸರ್ಕಾರದ ಮುಂದೆ ಇಲ್ಲ ಎಂದು ಪೆಟ್ರೋಲಿಯಂ ಖಾತೆ ಸಚಿವ ವೀರಪ್ಪ ಮೊಯಿಲಿ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಪೆಟ್ರೋಲ್ ಪಂಪ್ಗಳನ್ನು ರಾತ್ರಿ ಸಮಯದಲ್ಲಿ ಬಂದ್ ಮಾಡುವ ಬಗ್ಗೆ ನಾನು ಎಲ್ಲಿಯೂ ಮಾತನಾಡಿಲ್ಲ, ಈ ಬಗ್ಗೆ ಸಾರ್ವಜನಿಕರು ಮತ್ತು ಕೆಲ ಉದ್ಯಮಿಗಳು ಸಲಹೆ ನೀಡಿದ್ದರು ಎಂದು ಮೊಯಿಲಿ ತಿಳಿಸಿದರು.
ಪೆಟ್ರೋಲ್ ಬಳಕೆಯನ್ನು ತಗ್ಗಿಸಲು ಪಂಪ್ಗಳನ್ನು ಮುಚ್ಚುವುದರಿಂದ ಯಾವುದೇ ಪ್ರಯೋಜನವಿಲ್ಲ, ನಾಗರಿಕರೇ ಪೆಟ್ರೋಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಮೊಯಿಲಿ ಸಲಹೆ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.