ನವದೆಹಲಿ (ಪಿಟಿಐ): ಯೋಗ ಗುರು ಬಾಬಾ ರಾಮದೇವ್ ಅವರ ಹಣಕಾಸು ಮೂಲದ ಶೋಧ ಕಾರ್ಯದಲ್ಲಿ ತೊಡಗಿರುವ ಜಾರಿ ನಿರ್ದೇಶನಾಲಯ, ಅವರ ಟ್ರಸ್ಟ್ ವಿದೇಶಿ ವಿನಿಮಯ ನೋಂದಣಿ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಬಾಲಕೃಷ್ಣ ಅವರಿಗೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.
`ಬಾಲಕೃಷ್ಣ ಅಥವಾ ಅವರ ಪರವಾಗಿ ಯಾರಾದರೂ ಸದರಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಅಧಿಕೃತ ದಾಖಲೆ ಪತ್ರಗಳೊಂದಿಗೆ ಜನವರಿ 10 ರಂದು ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸಮನ್ಸ್ನಲ್ಲಿ ತಿಳಿಸಲಾಗಿದೆ~ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.