ADVERTISEMENT

ರಾಷ್ಟ್ರಪತಿಗೆ 2ಜಿ ಪ್ರಸ್ತಾವ ಕೇಂದ್ರ ಸಂಪುಟ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2012, 19:30 IST
Last Updated 10 ಏಪ್ರಿಲ್ 2012, 19:30 IST

ನವದೆಹಲಿ (ಐಎಎನ್‌ಎಸ್):  ತರಂಗಾಂತರ ಹಂಚಿಕೆ (2ಜಿ) ಹಗರಣದಲ್ಲಿ ವಿಚಾರಣೆ ಕೈಗೊಂಡಿದ್ದ ಸುಪ್ರೀಂಕೋರ್ಟ್ 122 ಕಂಪೆನಿಗಳ ಲೈಸನ್ಸ್ ರದ್ದು ಮಾಡಿದ್ದು ಇದನ್ನು ತೆರವುಗೊಳಿಸಲು ಕೋರಿ ರಾಷ್ಟ್ರಪತಿ ಪ್ರತಿಭಾ ಪಾಟೀಲ ಅವರ ಪರಾಮರ್ಶೆಗೆ ಕಳುಹಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಮಂಗಳವಾರ ಅಂಗೀಕರಿಸಿದೆ.

ಲೈಸನ್ಸ್ ಕೋರಿ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡುವ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಬೇಕು,  ಹರಾಜಿನಲ್ಲಿ ಪಾಲ್ಗೊಳ್ಳದ ನಾರ್ವೆಯ ಟೆಲಿನಾರ್ ಕುರಿತು ಮುಂದೇನು ಮಾಡಬಹುದು ಎಂಬಿತ್ಯಾದಿ ಅಂಶಗಳು ರಾಷ್ಟ್ರಪತಿಗೆ ಕಳುಸಿದ ಪರಾಮರ್ಶೆ ನಿರ್ಣಯದಲ್ಲಿದೆ. ಸಂವಿಧಾನದ ಕಲಂ 143 ಅನ್ವಯ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ರಾಷ್ಟ್ರಪತಿಗಳು ಸುಪ್ರೀಂಕೋರ್ಟ್‌ಗೆ ಪ್ರಸ್ತಾವನೆ ಸಲ್ಲಿಸಬಹುದಾಗಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.