ADVERTISEMENT

ರಾಷ್ಟ್ರಪತಿ ಭವನದಲ್ಲಿ ಇಫ್ತಾರ್‌ಕೂಟ ಇಲ್ಲ

ಪಿಟಿಐ
Published 6 ಜೂನ್ 2018, 19:30 IST
Last Updated 6 ಜೂನ್ 2018, 19:30 IST
ರಾಷ್ಟ್ರಪತಿ ಭವನದಲ್ಲಿ ಇಫ್ತಾರ್‌ಕೂಟ ಇಲ್ಲ
ರಾಷ್ಟ್ರಪತಿ ಭವನದಲ್ಲಿ ಇಫ್ತಾರ್‌ಕೂಟ ಇಲ್ಲ   

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಈ ವರ್ಷ ಇಫ್ತಾರ್‌ ಕೂಟ ಏರ್ಪಡಿಸದಿರಲು ರಾಷ್ಟ್ರಪತಿ ರಾಮನಾಥ ಕೋವಿಂದ್‌ ನಿರ್ಧರಿಸಿದ್ದಾರೆ.

ರಾಷ್ಟ್ರಪತಿ ಭವನ ಸಾರ್ವಜನಿಕ ಕಟ್ಟಡ. ಇಂತಹ ಜಾಗದಲ್ಲಿ ಜನರ ತೆರಿಗೆ ಹಣವನ್ನು ಬಳಸಿ ಯಾವುದೇ ಧಾರ್ಮಿಕ ಆಚರಣೆ ಅಥವಾ ಕಾರ್ಯಕ್ರಮ ಹಮ್ಮಿಕೊಳ್ಳದಿರಲು ಕೋವಿಂದ್‌ ಅವರು ತೀರ್ಮಾನಿಸಿದ್ದಾರೆ.

‘ಈ ನಿರ್ಧಾರ ದೇಶದ ಜಾತ್ಯತೀತ ತತ್ವಕ್ಕೆ ಅನುಗುಣವಾಗಿದ್ದು, ಯಾವುದೇ ಧರ್ಮದ ಧಾರ್ಮಿಕ ವಿಧಿ/ಆಚರಣೆಗೆ ಅನ್ವಯವಾಗಲಿದೆ’ ಎಂದು ರಾಷ್ಟ್ರಪತಿಗಳ ಮಾಧ್ಯಮ ಕಾರ್ಯದರ್ಶಿ ಅಶೋಕ್‌ ಮಲಿಕ್‌ ತಿಳಿಸಿದ್ದಾರೆ.

ADVERTISEMENT

ಆದರೆ, ಎಲ್ಲ ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ದೇಶದ ಜನತೆಗೆ ಶುಭಾಶಯ ಕೋರಲಿದ್ದಾರೆ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.