ADVERTISEMENT

ರಾಹುಲ್‌ ವಿರುದ್ಧ ಎಎಪಿ ಕುಮಾರ್‌ ವಿಶ್ವಾಸ್‌ ಸ್ಪರ್ಧೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2013, 19:30 IST
Last Updated 11 ಡಿಸೆಂಬರ್ 2013, 19:30 IST

ನವದೆಹಲಿ (ಪಿಟಿಐ):  ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಪ್ರದರ್ಶನ ದಾಖಲಿಸಿರುವ ಆಮ್‌ ಆದ್ಮಿ ಪಕ್ಷ ಈಗ ಲೋಕಸಭೆ ಚುನಾವಣೆಯತ್ತ ಗಮನ ಹರಿಸಿದೆ. ಪಕ್ಷದ ನಾಯಕರಲ್ಲೊಬ್ಬರಾಗಿರುವ ಕುಮಾರ್‌ ವಿಶ್ವಾಸ್‌ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸುವ ಬಗ್ಗೆ ಆಮ್‌ ಆದ್ಮಿ ಪಕ್ಷ ಸುಳಿವು ನೀಡಿದೆ.

ರಾಹುಲ್‌ ಗಾಂಧಿ ವಿರುದ್ಧ ಕುಮಾರ್‌ ವಿಶ್ವಾಸ್‌ ಸ್ಪರ್ಧಿಸಬಹುದು ಎಂದು ದೆಹಲಿಯ ಪತ್‌ಪರ್‌ಗಂಜ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಪಕ್ಷದ ಮುಖಂಡ ಮನೀಶ್‌ ಸಿಸೋಡಿಯ ಹೇಳಿದ್ದಾರೆ.

ಪಕ್ಷವು ಎಷ್ಟು ರಾಜ್ಯಗಳಲ್ಲಿ ಮತ್ತು ಎಷ್ಟು ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬ ಬಗ್ಗೆ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್‌ ಯಾವುದೇ ಮಾಹಿತಿ ನೀಡಿಲ್ಲ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹೆಚ್ಚಿನ ಹಣದ ಅವಶ್ಯಕತೆ ಇದ್ದು ಜನರು ಉದಾರವಾಗಿ ದೇಣಿಗೆ ನೀಡಬೇಕು ಎಂದು ಕೇಜ್ರಿವಾಲ್‌ ವಿನಂತಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.