ADVERTISEMENT

ರಾಹುಲ್ ಗಾಂಧಿ ರಾಜೀನಾಮೆಗೆ ಒತ್ತಾಯ

ಐಎಎನ್ಎಸ್
Published 21 ಮಾರ್ಚ್ 2017, 19:30 IST
Last Updated 21 ಮಾರ್ಚ್ 2017, 19:30 IST
ತಿರುವನಂತಪುರ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದಿದ್ದರೆ ಬೇರೆಯವರಿಗೆ ಆ ಜವಾಬ್ದಾರಿಯನ್ನು ಬಿಟ್ಟುಕೊಡುವುದು ಒಳಿತು ಎಂದು ಯುವ ಕಾಂಗ್ರೆಸ್ ಮುಖಂಡ ಸಿ. ಆರ್. ಮಹೇಶ್ ಹೇಳಿದ್ದಾರೆ.
 
‘ಗೌರವಾನ್ವಿತ ರಾಹುಲ್ ಗಾಂಧಿ ಅವರೆ, ನಿಮಗೆ ಪಕ್ಷವನ್ನು ಮುನ್ನಡೆಸುವ ಮನಸಿಲ್ಲದಿದ್ದರೆ ದಯವಿಟ್ಟು ಬೇರೆಯವರಿಗೆ ಅವಕಾಶ ಮಾಡಿಕೊಡಿ, ದೇಶದ ಎಲ್ಲಾ ಭಾಗದಲ್ಲೂ ಭದ್ರ ತಳಹದಿ ಇದ್ದ ದೊಡ್ಡ ಪಕ್ಷ  ಈಗ ನೆಲ ಕಚ್ಚಿದೆ’ ಎಂದು ಯುವ ಕಾಂಗ್ರೆಸ್ ಉಪಾಧ್ಯಕ್ಷ  ಮಹೇಶ್ ಅವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.
 
ಮಾಜಿ ರಕ್ಷಣಾ ಸಚಿವ ಮತ್ತು ಹಿರಿಯ ಮುಖಂಡ ಎ. ಕೆ. ಆ್ಯಂಟನಿ ಅವರು ಮೌನ ಮುರಿದು ಪಕ್ಷದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.