ನವದೆಹಲಿ (ಪಿಟಿಐ): ರೈತರ ಆತ್ಮಹತ್ಯೆ ಪ್ರಮಾಣ ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. ಮಹಾರಾಷ್ಟ್ರ, ಆಂಧ್ರ ಪ್ರದೇಶ, ಉತ್ತರ ಪ್ರದೇಶ ಮತ್ತು ಕೇರಳದಂತಹ ಕೆಲವು ರಾಜ್ಯಗಳಲ್ಲಿ ಈ ಪ್ರಮಾಣ ಏರಿಕೆಯಾಗಿದೆ.
2012ರಲ್ಲಿ 13,754 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, 2011ರಲ್ಲಿ 14,027 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಕೃಷಿ ಖಾತೆ ರಾಜ್ಯ ಸಚಿವ ತಾರೀಖ್ ಅನ್ವರ್ ರಾಜ್ಯಸಭೆಗೆ ತಿಳಿಸಿದ್ದಾರೆ.
ರೈತರ ಆತ್ಮಹತ್ಯೆ ಕಡಿಮೆಯಾಗಿರುವ ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ. ಕೌಟುಂಬಿಕ ಸಮಸ್ಯೆ, ದಿವಾಳಿತನ ಇತ್ಯಾದಿ ಆತ್ಮಹತ್ಯೆಗೆ ಕಾರಣ ಎಂದು ಸಚಿವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.