ADVERTISEMENT

ರೈಲುಗಳ ಡಿಕ್ಕಿ: ಕೆಲವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 7 ಜನವರಿ 2012, 19:30 IST
Last Updated 7 ಜನವರಿ 2012, 19:30 IST

ಕೋಲ್ಕತ್ತ (ಪಿಟಿಐ): ಎರಡು ಸ್ಥಳೀಯ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದು ಚಾಲಕ ಹಾಗೂ ಕೆಲ ಪ್ರಯಾಣಿಕರು ಗಾಯಗೊಂಡ ಘಟನೆ ಕೃಷ್ಣನಗರ- ಶಾಂತಿಪುರ ವಲಯದ ಫುಲಿಯಾ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದೆ.

ಎದುರಿನಿಂದ ಬಂದ ಶಾಂತಿಪುರ- ಸೆಲ್ಡಾ ರೈಲು, ನಿಲ್ದಾಣದಲ್ಲಿ ನಿಂತಿದ್ದ ಸೆಲ್ಡಾ- ಶಾಂತಿಪುರ ರೈಲಿಗೆ ಡಿಕ್ಕಿ ಹೊಡೆಯಿತು ಎಂದು ಪೂರ್ವ ರೈಲ್ವೆ ಅಧಿಕಾರಿ ಸಮೀರ್ ಗೋಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.