ADVERTISEMENT

ಲಾರಿಯಲ್ಲಿದ್ದ ಹಣ ಶ್ರೀನಿವಾಸರೆಡ್ಡಿಗೆ ಸೇರಿದ್ದು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 19:30 IST
Last Updated 16 ಸೆಪ್ಟೆಂಬರ್ 2011, 19:30 IST

ಅನಂತಪುರ (ಪಿಟಿಐ): ಲಾರಿ ಮೂಲಕ ಸಾಗಿಸುತ್ತಿದ್ದ 4.95 ಕೋಟಿ ರೂಪಾಯಿ ಹಣ ಬಿ.ವಿ.ಶ್ರೀನಿವಾಸ ರೆಡ್ಡಿ ಅವರಿಗೆ ಸೇರಿದ್ದು ಎಂದು ಮೇಲ್ನೋಟಕ್ಕೆ ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗುರುವಾರ ಗುಂತಕಲ್ ಬಳಿ ಪೊಲೀಸರು ಲಾರಿ ತಡೆದು ಹಣ ವಶಪಡಿಸಿಕೊಂಡಿದ್ದರು. ಜತೆಗೆ ಇಬ್ಬರನ್ನು ಬಂಧಿಸಿದ್ದರು. 

ಬಳ್ಳಾರಿಯಲ್ಲಿ ಅನಾಮಧೇಯ ವ್ಯಕ್ತಿಗಳು ಈ ಹಣವನ್ನು ನೀಡಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಈ ಹಣ ಓಸಿಎಂ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರಿಗೆ ಸೇರಿರುವ ಬಗ್ಗೆ ಮಾಹಿತಿ ಇದೆ ಎಂದೂ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.