ADVERTISEMENT

ಲೋಕಪಾಲಕ್ಕೆ ವಿರೋಧ: ಎಸ್‌ಪಿ ಸಭಾತ್ಯಾಗ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2013, 15:20 IST
Last Updated 17 ಡಿಸೆಂಬರ್ 2013, 15:20 IST
– ಪಿಟಿಐ ಚಿತ್ರ
– ಪಿಟಿಐ ಚಿತ್ರ   

ನವದೆಹಲಿ (ಐಎಎನ್ಎಸ್): ಬಹುನಿರೀಕ್ಷಿತ ಲೋಕಪಾಲ ಮಸೂದೆಗೆ ಸಮಾಜವಾದಿ ಪಕ್ಷವು ವಿರೋಧ ವ್ಯಕ್ತಪಡಿಸಿದೆ. ಮಸೂದೆ ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿಲ್ಲ ಎಂದು ಆಕ್ಷೇಪಿಸಿ ಸಮಾಜವಾದಿ ಪಕ್ಷದ ಸದಸ್ಯರು ರಾಜ್ಯಸಭೆಯಿಂದ ಹೊರನಡೆದ ಘಟನೆ ಮಂಗಳವಾರ ನಡೆದಿದೆ.

ಈ ಮಸೂದೆ ಹೇಳುವಂತೆ ಯಾವುದೇ ವ್ಯಕ್ತಿ ದೂರು ಸಲ್ಲಿಸಬಹುದು ಮತ್ತು ನಾವು ಆ ಕುರಿತು ಹೇಳಿಕೆ ನೀಡಲು ವಿಚಾರಣೆ ನಡೆಸುವ ಪೊಲೀಸ್ ಅಧಿಕಾರಿಗಳ ಬಳಿಗೆ ಹೋಗಬೇಕಾಗುತ್ತದೆ. ಇದರಿಂದ ದೇಶದಲ್ಲಿ ಸಂದಿಗ್ಧ ವಾತಾವರಣ ನಿರ್ಮಾಣವಾಗಲಿದ್ದು, ಅಧಿಕಾರಿಗಳು ಯಾವುದೇ ಕೆಲಸ ಮಾಡಲು ಹಿಂಜರಿಯುವಂತಾಗುತ್ತದೆ ಎಂದು ಎಸ್‌ಪಿ ಮುಖಂಡ ರಾಮಗೋಪಾಲ್ ಯಾದವ್ ಅವರು ಮಸೂದೆ ಕುರಿತು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT