ADVERTISEMENT

ಲೋಕಪಾಲ ಆಯ್ಕೆ ಸಮಿತಿ ಸಭೆ: ಕಾಂಗ್ರೆಸ್ ಬಹಿಷ್ಕಾರ

ಪಿಟಿಐ
Published 10 ಏಪ್ರಿಲ್ 2018, 19:30 IST
Last Updated 10 ಏಪ್ರಿಲ್ 2018, 19:30 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಲೋಕಪಾಲ ಆಯ್ಕೆ ಸಮಿತಿ ಸಭೆಯನ್ನು ಕಾಂಗ್ರೆಸ್ ಪುನಃ ಬಹಿಷ್ಕರಿಸಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

‘ಆಯ್ಕೆ ಪ್ರಕ್ರಿಯೆಯಲ್ಲಿ ವಿರೋಧ ಪಕ್ಷದ ಅಭಿಪ್ರಾಯವನ್ನು ನಿರ್ಲಕ್ಷಿಸುವ ಏಕೈಕ ಉದ್ದೇಶದಿಂದ, ‘ವಿಶೇಷ ಆಹ್ವಾನಿತ’ ಎಂದು ಸರ್ಕಾರ ನನ್ನನ್ನು ಸಭೆಗೆ ಆಹ್ವಾನಿಸಿದೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆಹ್ವಾನ ತಿರಸ್ಕರಿಸಿರುವ ಖರ್ಗೆ, ‘ಲೋಕಪಾಲಕ್ಕೆ  ಸರ್ಕಾರ ಆದ್ಯತೆ ಮತ್ತು ಪ್ರಾಮುಖ್ಯ ನೀಡಿಲ್ಲ. ಈ ವಿಷಯದಲ್ಲಿ ಸರ್ಕಾರದ ಇಬ್ಬಗೆಯ ಧೋರಣೆ ಬಹಿರಂಗವಾಗಿದೆ’ ಎಂದು ಆರೋಪಿಸಿದ್ದಾರೆ.

ADVERTISEMENT

ಈ ಹಿಂದೆಯೂ ಇದೇ ರೀತಿ ಕರೆಯಲಾಗಿದ್ದ ಸಭೆಯನ್ನು ಬಹಿಷ್ಕರಿಸಿ ಖರ್ಗೆ ಅವರು ಮಾರ್ಚ್ 1ರಂದು ಪ್ರಧಾನಿಗೆ ಪತ್ರ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.