ADVERTISEMENT

ಲೋಕಪಾಲ ಚರ್ಚೆ: ಬನ್ಸಲ್ ಭರವಸೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2012, 19:30 IST
Last Updated 14 ಮಾರ್ಚ್ 2012, 19:30 IST

ನವದೆಹಲಿ (ಐಎಎನ್‌ಎಸ್): ಬಜೆಟ್ ಅಧಿವೇಶನದ ಮೊದಲ ಅವಧಿಯಲ್ಲೇ ಲೋಕಪಾಲ ಮಸೂದೆ ಚರ್ಚೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪವನ್ ಕುಮಾರ್ ಬನ್ಸಲ್ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಮೇಲ್ಮನೆಯಲ್ಲಿ ಲೋಕಪಾಲ ಮಸೂದೆ ಕುರಿತ ಚರ್ಚೆಯನ್ನು ಮುಂದುವರಿಸಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯ ನಡುವೆಯೇ, ಆರ್ಥಿಕ ವಿಷಯಗಳ ಕುರಿತ ಚರ್ಚೆಯ ನಂತರ ಬಜೆಟ್ ಅಧಿವೇಶನದಲ್ಲೇ ಲೋಕಪಾಲ ಮಸೂದೆ ಚರ್ಚೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.