ADVERTISEMENT

ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2011, 14:00 IST
Last Updated 19 ಸೆಪ್ಟೆಂಬರ್ 2011, 14:00 IST

 ಬೆಂಗಳೂರು (ಐಎಎನ್ಎಸ್): ಎರಡು ವಸತಿ ನಿವೇಶನಗಳನ್ನು ಹೊಂದಿರುವ ಬಗ್ಗೆ ತಮ್ಮ ಹಾಗೂ ತಮ್ಮ ಪತ್ನಿಯ ಮೇಲೆ ಬಂದ ಆರೋಪದ ಹಿನ್ನೆಲೆಯಲ್ಲಿ ಭುಗಿಲೆದ್ದ ವಿವಾದವನ್ನು ಅನುಸರಿಸಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ್ ವಿರೂಪಣ್ಣ ಪಾಟೀಲ್ ಅವರು ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಪಾಟೀಲ್ ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರಿಗೆ ಸಲ್ಲಿಸಿದರು. ಇದರೊಂದಿಗೆ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಅವರ ಉತ್ತರಾಧಿಕಾರಿಯಾಗಿ ಐದು ವರ್ಷಗಳ ಅವಧಿಗೆ ನೇಮಕಗೊಂಡ ಪಾಟೀಲ್ ಅವರ ಅಧಿಕಾರಾವಧಿ ಒಂದೂವರೆ ತಿಂಗಳಿಗೆ ಮುಕ್ತಾಯಗೊಂಡಿತು.
ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಪಾಟೀಲ್ ಅವರು ಲೋಕಾಯುಕ್ತರಾಗಿ ಆಗಸ್ಟ್ 3ರಂದು ಅಧಿಕಾರ ವಹಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.