ADVERTISEMENT

ವರದಕ್ಷಿಣೆಗೆ ಪತ್ನಿಯನ್ನು ಬಾವಿಗೆ ತಳ್ಳಿದ ಭೂಪ!

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2012, 19:59 IST
Last Updated 19 ಡಿಸೆಂಬರ್ 2012, 19:59 IST

ಜೈಪುರ/ಒಡಿಶಾ (ಪಿಟಿಐ): ಹೆಚ್ಚಿನ ವರದಕ್ಷಿಣೆಗಾಗಿ ವ್ಯಕ್ತಿಯೊಬ್ಬ ತನ್ನ ಮಡದಿಯನ್ನು ಬಾವಿಗೆ ತಳ್ಳಿದ ಘಟನೆ ಒಡಿಶಾದ ಜೈಪುರ ಜಿಲ್ಲೆಯ ನುವಗಾಂವ್ ಗ್ರಾಮದಲ್ಲಿ ನಡೆದಿದೆ.

ಪತ್ನಿಯ ಚೀರಾಟ ಕೇಳಿ ಕೂಡಲೇ ಸ್ಥಳಕ್ಕೆ ಬಂದ ನೆರೆಹೊರೆಯವರು ಮಹಿಳೆಯನ್ನು ಬಾವಿಯಿಂದ ಮೇಲೆತ್ತಿ ಪ್ರಾಣ ರಕ್ಷಿಸಿದ್ದಾರೆ. ಘಟನೆ ನಂತರ ಪತಿ ತಲೆ ಮರೆಸಿಕೊಂಡ್ದ್ದಿದು, ಪೊಲೀಸರು  ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.