ಕೇದಾರನಾಥ: ಭಾರತೀಯ ವಾಯುಪಡೆಯ ‘ಎಂಐ17’ ಹೆಲಿಕಾಪ್ಟರ್ ಕೇದಾರನಾಥ ದೇಗುಲದ ಬಳಿ ಪತನಗೊಂಡಿದ್ದು, ಪೈಲಟ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಪೈಲಟ್, ಸಹ ಪೈಲಟ್ ಹಾಗೂ ಆರು ಮಂದಿ ಪ್ರಯಾಣಿಕರನ್ನು ಒಳಗೊಂಡಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭ ಕಬ್ಬಿಣದ ತೊಲೆಗೆ ಡಿಕ್ಕಿಯಾಗಿ ಪತನಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ.
‘ಹೆಲಿಕಾಪ್ಟರ್ನಲ್ಲಿದ್ದ ಎಲ್ಲರನ್ನು ರಕ್ಷಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ. ಘಟನೆಗೆ ಕಾರಣವೇನೆಂಬುದು ತನಿಖೆಯಿಂದ ತಿಳಿದುಬರಲಿದೆ’ ಎಂದು ವಾಯುಪಡೆಯ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.