ವಾರಾಣಸಿ (ಉತ್ತರ ಪ್ರದೇಶ): ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳು ವಿನ್ಯಾಸಗಳಿಸಿ, ನಿರ್ಮಿಸಿರುವ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾನುವಾರ ಅನಾವರಣಗೊಳಿಸಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ (1906-1931). ಹಲವು ಅಪರಾಧಗಳಿಗಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ಸ್ವಾತಂತ್ರ್ಯ ಹೋರಾಟಗಾರನ ಪುತ್ಥಳಿ ನಿರ್ಮಿಸಿರುವುದು ವಿಶೇಷ ಎನಿಸಿದೆ.
ಈ ಪ್ರತಿಮೆಯನ್ನು ವಾರಾಣಸಿಯ ಕೇಂದ್ರ ಕಾರಾಗೃಹದ ಆವರಣದಲ್ಲಿ ನಿರ್ಮಿಸಲಾಗಿದೆ. ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.