ವಾರಾಣಸಿ: ವಾರಾಣಸಿಯ ರೈಲ್ವೆ ನಿಲ್ದಾಣ ಸಮೀಪ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯ ಒಂದು ಭಾಗ ಮಂಗಳವಾರ ಕುಸಿದು ಬಿದ್ದು 12 ಮಂದಿ ಮೃತಪಟ್ಟಿದ್ದಾರೆ.
ದಂಡು ಪ್ರದೇಶದಲ್ಲಿ ಮೇಲ್ಸೇತುವೆಯ ಎರಡು ಪಿಲ್ಲರ್ಗಳ ನಡುವೆ ಅಳವಡಿಸುತ್ತಿದ್ದ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದಿದೆ. ಮೇಲ್ಸೇತುವೆ ಮೇಲೆ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರು ಮೃತಪಟ್ಟಿದ್ದಾರೆ. ಕೆಲವು ಬೈಕ್ಗಳು, ಕಾರು, ಜೀಪು, ಆಟೊ ಹಾಗೂ ಒಂದು ಬಸ್ ಸ್ಲ್ಯಾಬ್ ಅಡಿ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿವೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.