ಶ್ರೀನಗರ: ಕಠುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಗೆ ವಿಶೇಷ ತ್ವರಿತಗತಿಯ ನ್ಯಾಯಾಲಯ ಸ್ಥಾಪಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ಗೆ ಪತ್ರ ಬರೆದಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಾಗಿರುವ ಪೇದೆಗಳನ್ನು ಕರ್ತವ್ಯದಿಂದ ಅಮಾನತು ಮಾಡಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ.
ಬಕ್ರೆವಾಲಾ ಅಲೆಮಾರಿ ಸಮುದಾಯಕ್ಕೆ ಸೇರಿದ 8 ವರ್ಷದ ಬಾಲಕಿ ಮೇಲೆ ಅತ್ಯಾಚರ ಎಸಗಿ ಹತ್ಯೆ ಮಾಡಿದ ಪ್ರಕರಣ ದೇಶದಾದ್ಯಂತ ಚರ್ಚೆಯಾಗುತ್ತಿದೆ.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.