ADVERTISEMENT

ವಿಜಯಕಾಂತ್ ನ್ಯಾಯಾಲಯಕ್ಕೆ ಶರಣು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2013, 11:20 IST
Last Updated 18 ಏಪ್ರಿಲ್ 2013, 11:20 IST
ವಿಜಯಕಾಂತ್ ನ್ಯಾಯಾಲಯಕ್ಕೆ ಶರಣು
ವಿಜಯಕಾಂತ್ ನ್ಯಾಯಾಲಯಕ್ಕೆ ಶರಣು   

ತಿರುವಣ್ಣಾಮಲೈ (ಪಿಟಿಐ): ಇಲ್ಲಿನ ಸ್ಥಳೀಯ ನ್ಯಾಯಾಲಯದ ಜಾಮೀನು ರಹಿತ ಬಂಧನ ವಾರೆಂಟ್ ಎದುರಿಸುತ್ತಿರುವ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ  ನಾಯಕ, ಎಂಡಿಕೆ ಸ್ಥಾಪಕ ವಿಜಯಕಾಂತ್ ಅವರು ಗುರುವಾರ ನ್ಯಾಯಾಲಯಕ್ಕೆ ಶರಣಾದರು.

ಜಯಲಲಿತಾ ಸರ್ಕಾರವು ವಿಜಯಕಾಂತ್ ಅವರ ವಿರುದ್ಧ ಮಾನನಷ್ಟ ಪ್ರಕರಣವನ್ನು ದಾಖಲೆ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಕಾಂತ್ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ನ್ನು ಜಾರಿಗೊಳಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶೆ ಕಮಲಾವತಿ ಅವರು ವಿಜಯಕಾಂತ್ ಅವರಿಗೆ ನ್ಯಾಯಾಲಯದಲ್ಲಿ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದ್ದರು. ಆದರೆ, ವಿಜಯಕಾಂತ್ ಅವರು ನ್ಯಾಯಾಲಯಕ್ಕೆ ಹಾಜರಾಗುವಲ್ಲಿ ವಿಫಲರಾಗಿದ್ದರು.

ವಿಜಯಕಾಂತ್ ಅವರಿಗೆ ಬುಧವಾರ ಜಾಮೀನು ರಹಿತ ವಾರೆಂಟ್‌ನ್ನು ಜಾರಿಗೊಳಿಸಲಾಗಿತ್ತು.ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.