ADVERTISEMENT

ವಿಜಯ್ ಬಹುಗುಣ ಜಯಶಾಲಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2012, 19:30 IST
Last Updated 11 ಜುಲೈ 2012, 19:30 IST

ಡೆಹ್ರಾಡೂನ್ (ಪಿಟಿಐ):  ಉತ್ತರಾಖಂಡದ ಸಿತಾರ್‌ಗಂಜ್ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರು ಭಾರಿ ಅಂತರದಿಂದ ಜಯಗಳಿಸಿದ್ದಾರೆ. 

ಬಹುಗುಣ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಪಂತ್ ಅವರನ್ನು  39,954 ದಾಖಲೆ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಉತ್ತರಾಖಂಡದ ವಿಧಾನಸಭಾ ಕ್ಷೇತ್ರಗಳಲ್ಲಿ ಇದುವರೆಗೆ ನಡೆದ ದಾಖಲೆ ಅಂತರದ ಗೆಲುವು ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಹುಗುಣ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಕೂಲವಾಗುವಂತೆ ಬಿಜೆಪಿಯ ಕಿರಣ್ ಮಂಡಲ್ ಅವರು ಸ್ಥಾನ ತ್ಯಜಿಸಿದ ಹಿನ್ನೆಲೆಯಲ್ಲಿ ಜುಲೈ 8ರಂದು ಉಪ ಚುನಾವಣೆ ನಡೆದಿತ್ತು.
ಬಹುಗುಣ ಅವರ ವಿಜಯದಿಂದಾಗಿ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲ 33ಕ್ಕೆ ಏರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.