ಹೈದರಾಬಾದ್ (ಪಿಟಿಐ): ವೈ.ಎಸ್. ಜಗನ್ಮೋಹನ್ ರೆಡ್ಡಿ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಿಸಿರುವ `ಜಗತಿ~ ಪ್ರಕಟಣೆಯ ಉಪಾಧ್ಯಕ್ಷ ವಿ.ವಿಜಯ ಸಾಯಿ ರೆಡ್ಡಿ ಅವರ ಸಿಬಿಐ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಮೂರು ದಿನಗಳ ಕಾಲ ವಿಸ್ತರಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯವು ಸಾಯಿ ರೆಡ್ಡಿ ಅವರ ಬಂಧನ ಅವಧಿಯನ್ನು ಈ ತಿಂಗಳ 16ರವರೆಗೆ ವಿಸ್ತರಿಸಿದ್ದು, 17ರಂದು ಮತ್ತೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.
ಪ್ರಕರಣಕ್ಕೆ ಸಂಬಂಧಿಸಿ ರೆಡ್ಡಿ ಅವರು ಮಹತ್ವದ ಮಾಹಿತಿಗಳನ್ನು ನೀಡಿದ್ದು, ಇನ್ನೂ ಹೆಚ್ಚಿನ ಮಾಹಿತಿ ಪಡೆಯಲು ವಿಚಾರಣೆ ನಡೆಸಬೇಕಾಗಿದೆ. ಆದ್ದರಿಂದ ಬಂಧನದ ಅವಧಿಯನ್ನು ವಿಸ್ತರಿಸಬೇಕು ಎಂದು ಸಿಬಿಐ ವಕೀಲರು ಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.