ADVERTISEMENT

ವಿದೇಶ ಪ್ರವಾಸದಲ್ಲಿ ಬ್ಯಾಂಕ್‌ಗೆಳಿಗೆ ಭೇಟಿ ನೀಡುವುದಿಲ್ಲ: ಕಾರ್ತಿ ಚಿದಂಬರಂ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2017, 19:30 IST
Last Updated 9 ಅಕ್ಟೋಬರ್ 2017, 19:30 IST
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ   

ನವದೆಹಲಿ: ವಿದೇಶ ಪ್ರವಾಸದ ವೇಳೆ ಯಾವುದೇ ಬ್ಯಾಂಕ್‌ಗಳಿಗೆ ಭೇಟಿ ನೀಡುವುದಿಲ್ಲ ಎಂದು ಕಾರ್ತಿ ಚಿದಂಬರಂ ಅವರು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

‘ಮಗಳ ವಿದ್ಯಾಭ್ಯಾಸದ ಸಲುವಾಗಿ ಕಾರ್ತಿ ಅವರು ಕೇಂಬ್ರಿಡ್ಜ್‌ಗೆ ತೆರಳಬೇಕೆಂದು ಕೇಳಿಕೊಳ್ಳುತ್ತಿದ್ದಾರೆ. ವಿದೇಶದಲ್ಲಿ ಬ್ಯಾಂಕ್‌ಗಳಿಗೆ ಭೇಟಿ ನೀಡುವುದಿಲ್ಲ ಎಂದು ಪ್ರಮಾಣಪತ್ರ ನೀಡಲು ಅವರು ಸಿದ್ಧರಿದ್ದಾರೆ’ ಎಂದು ಅವರ ಪರ ವಕೀಲರಾಗಿರುವ ಕಪಿಲ್ ಸಿಬಲ್ ಸು‍ಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠಕ್ಕೆ ಈ ಅರ್ಜಿ ಸಲ್ಲಿಸಲಾಗಿದೆ. ಸಿಬಿಐ ಪರ ವಕೀಲರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಇಲ್ಲದ ಕಾರಣ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ಮಂಗಳವಾರಕ್ಕೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.