ADVERTISEMENT

ವಿ.ವಿ. ಲೈಂಗಿಕ ಹಗರಣ: ಬಂಧನ

ಪಿಟಿಐ
Published 25 ಏಪ್ರಿಲ್ 2018, 19:30 IST
Last Updated 25 ಏಪ್ರಿಲ್ 2018, 19:30 IST

ವಿರುದುನಗರ್‌ (ತಮಿಳುನಾಡು): ಮದುರೆ ಕಾಮರಾಜ್‌ ವಿಶ್ವವಿದ್ಯಾಲಯದ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಬೋಧನಾ ವಿಭಾಗದ ಹಿರಿಯ ಸಿಬ್ಬಂದಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ, ಸಂಶೋಧನಾ ವಿದ್ಯಾರ್ಥಿಯು ನ್ಯಾಯಾಲಯಕ್ಕೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ವಿ. ಮುರುಘನ್‌ ಅವರನ್ನು ಮಂಗಳವಾರ ರಾತ್ರಿ ಬಂಧಿಸಿ, ಬುಧವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇವರನ್ನು ಐದು ದಿನ ಸಿಬಿ– ಸಿಐಡಿ ವಶಕ್ಕೆ ಒಪ್ಪಿಸಲಾಗಿದೆ.   

ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ಕರುಪ್ಪಸಾಮಿ, ಮದುರೆ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ADVERTISEMENT

ಈ ಇಬ್ಬರು ಲೈಂಗಿಕ ಹಗರಣದಲ್ಲಿ ಪಾಲುದಾರರು ಎಂಬುದನ್ನು ಪ್ರಕರಣದ ಪ್ರಮುಖ ಆರೋಪಿ ನಿರ್ಮಲಾ ದೇವಿ ಅವರು ಸಿಬಿ–ಸಿಐಡಿಗೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.