ADVERTISEMENT

ವೋಟಿಗಾಗಿ ನೋಟು: ಕುಲಕರ್ಣಿ ಜಾಮೀನು ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2011, 10:55 IST
Last Updated 21 ಅಕ್ಟೋಬರ್ 2011, 10:55 IST

ನವದೆಹಲಿ (ಪಿಟಿಐ): 2008ರ ವೋಟಿಗಾಗಿ ನೋಟು ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಎಲ್.ಕೆ. ಅಡ್ವಾಣಿ ಅವರ ನಿಕಟವರ್ತಿ ಸುಧೀಂದ್ರ ಕುಲಕರ್ಣಿ ಸೇರಿದಂತೆ ಮೂವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ವಜಾ ಮಾಡಿದೆ.

ಸುಧೀಂದ್ರ ಕುಲಕರ್ಣಿ ಹಾಗೂ ಬಿಜೆಪಿಯ ಮಾಜಿ ಸಂಸದ ಫಗನ್ ಸಿಂಗ್ ಕುಲಸ್ತೆ ಮತ್ತು ಮಹೇಂದ್ರ ಸಿಂಗ್ ಭಗೋರಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂಗೀತ ಧಿಂಗ್ರಾ ಸೇಹಗಲ್ ಅವರು, ~ಕ್ಷಮಿಸಿ ನಾನು ನಿಮ್ಮೆಲ್ಲರಿಗೂ ಜಾಮೀನು ನೀಡಲಾಗುವುದಿಲ್ಲ~ ಎನ್ನುತ್ತಾ ಮೂವರ ಜಾಮೀನು ಅರ್ಜಿಯನ್ನು ವಜಾಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.