ಪಣಜಿ (ಐಎಎನ್ಎಸ್): `ವೋಟಿಗಾಗಿ ನೋಟು ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಬಿಜೆಪಿ ಮತ್ತು ಇತರ ಸಂಸತ್ ಸದಸ್ಯರಿಗೆ ಪದ್ಮ ಪ್ರಶಸ್ತಿ ನೀಡಬೇಕಿತ್ತು~ ಎಂದು ಬಿಜೆಪಿಯ ಹಿರಿಯ ಮುಖಂಡ ವೆಂಕಯ್ಯ ನಾಯ್ಡು ಶುಕ್ರವಾರ ಹೇಳಿದ್ದಾರೆ.
ಗೋವಾದಲ್ಲಿ ಎಲ್.ಕೆ ಅಡ್ವಾಣಿ ಅವರ ರಥ ಯಾತ್ರೆಯು ಹಾದುಹೋಗಲಿರುವ ಹಿನ್ನೆಲೆಯಲ್ಲಿ ಸಿದ್ಧತೆಯ ಮೇಲ್ವಿಚಾರಣೆ ನೋಡಿಕೊಳ್ಳಲು ಪಣಜಿಯಲ್ಲಿರುವ ಬಿಜೆಪಿ ಮಾಜಿ ಅಧ್ಯಕ್ಷ ವೆಂಕಯ್ಯ ನಾಯ್ಡು, `ಈ ಹಗರಣದಿಂದ ಲಾಭ ಪಡೆದಿರುವವರನ್ನು ಗುರಿಯಾಗಿಸುವುದನ್ನು ಬಿಟ್ಟು, ಕೇಂದ್ರ ಸರ್ಕಾರವು ಆಡಳಿತ ಯಂತ್ರವನ್ನು ಬಳಸಿಕೊಂಡು ಹಗರಣವನ್ನು ಬಯಲು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ~ ಎಂದು ಕಿಡಿ ಕಾರಿದರು.
`ಸರ್ಕಾರವನ್ನು ಉಳಿಸಿಕೊಳ್ಳುವುದಕ್ಕಾಗಿ ಯುಪಿಎ ಲಂಚ ಸಂಸದರಿಗೆ ಲಂಚ ನೀಡಿತ್ತು. ಈ ವಂಚನೆಯನ್ನು ಬಯಲಿಗೆಳೆದ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕಿತ್ತು~ ಎಂದು ಹೇಳಿದರು.
`ದುಡ್ಡನ್ನು ಸಂಸತ್ಗೆ ತಂದು ಹಗರಣ ಬಯಲು ಮಾಡಿದ್ದಕ್ಕೆ ನಮ್ಮ ಸಂಸದರನ್ನು ಅಭಿನಂದಿಸಬೇಕಿತ್ತು. ಬದಲಿಗೆ ಅವರು ಸಂಸತ್ಗೆ ಕಳಂಕ ತಂದರು ಎನ್ನಲಾಯಿತು~ ಎಂದು ನಾಯ್ಡು ದೂರಿದರು.
ಈ ಪ್ರಕರಣದಲ್ಲಿ ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಕೇಂದ್ರವು ದೆಹಲಿ ಪೊಲೀಸರನ್ನು ತನಗೆ ಬೇಕಾದಂತೆ ಬಳಸಿಕೊಳ್ಳುತ್ತಿದೆ ಎಂದೂ ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.