ಚೆನ್ನೈ: ತಮಿಳುನಾಡಿನ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರ ನಿಧನಕ್ಕೆ ಮಿಡಿದ ನಾಡಿನ ಗಣ್ಯಾಧಿಗಣ್ಯರು, ರಾಜಕೀಯ ಮುಖಂಡರು ಕೊನೆಯ ನುಡಿ ನಮನಗಳನ್ನು ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಗೃಹ ಸಚಿವ ರಾಜನಾಥ ಸಿಂಗ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಾಂಗ್ರೆಸ್ ಪಕ್ಷದ ಅಧಿಕೃತ ಕಚೇರಿ ಟ್ವೀಟ್ ಮೂಲಕ ಅವರ ಸೇವಾ ಮನೋಭಾವವನ್ನು ನೆನೆದಿದ್ದಾರೆ.
ಸ್ವಾಮೀಜಿ ಅವರು ತಮ್ಮ ಸೇವಾ ಮನೋಭಾವ,, ಮೌಲ್ಯಯುತ ಚಿಂತನೆಗಳ ಮೂಲಕ ಲಕ್ಷಾಂತರ ಭಕ್ತರ ಹೃದಯ ಮತ್ತು ಮನಸ್ಸುಗಳಲ್ಲಿ ನೆಲೆನಿಂತಿದ್ದಾರೆ. ನಮ್ಮನ್ನು ಅಗಲಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.