ADVERTISEMENT

ಶಂಕರ್ ಬಿದರಿ ಪ್ರಕರಣ: ಹೈಕೋರ್ಟ್ ಆದೇಶ ರದ್ದು ಮಾಡಿದ ಸುಪ್ರೀಂ

​ಪ್ರಜಾವಾಣಿ ವಾರ್ತೆ
Published 1 ಜೂನ್ 2012, 10:40 IST
Last Updated 1 ಜೂನ್ 2012, 10:40 IST

ನವದೆಹಲಿ (ಐಎಎನ್ಎಸ್): ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಸ್ಥಾನಕ್ಕೆ ಶಂಕರ ಬಿದರಿ ಅವರು ಅರ್ಹರಲ್ಲ ಎಂದು  ಸೋಮವಾರ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ರದ್ದುಗೊಳಿಸಿತು.

ನ್ಯಾಯಮೂರ್ತಿಗಳಾದ ಕೆ.ಎಸ್.ರಾಧಾಕೃಷ್ನನ್ ಹಾಗೂ ಸಿ.ಕೆ.ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ರಾಜ್ಯದ ನೂತನ ಪೊಲೀಸ್ ಮುಖ್ಯಸ್ಥರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದೆ.

ಹೈಕೋರ್ಟ್ ಪ್ರಸ್ತಾಪಿಸಿದ್ದ ನರಹಂತಕ ವೀರಪ್ಪನ್ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಬಲಾತ್ಕಾರ ಹಾಗೂ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಸದಾಶಿವ ಆಯೋಗದ ವರದಿ ಸೇರಿದಂತೆ ವಿಶೇಷ ಕಾರ್ಯಪಡೆಯ ಮುಖ್ಯಸ್ಥರಾಗಿದ್ದ ಶಂಕರ ಬಿದರಿ ಅವರ ಸೇವಾ ಅವಧಿಯಲ್ಲಿ ಅವರ ಮೇಲೆ ಯಾವುದೇ ರೀತಿಯಾದ ಆರೋಪಗಳು ಇರಲಿಲ್ಲ ಎಂದು ಸುಪ್ರೀಂ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.