ಶ್ರೀನಗರ: ಬಾರಾಮುಲ್ಲಾ ಪಟ್ಟಣದ ಹೊರವಲಯದಲ್ಲಿರುವ ಸೇನಾ ಶಿಬಿರದಿಂದ ಭಾರತೀಯ ಯೋಧರೊಬ್ಬರು ಶಸ್ತ್ರಾಸ್ತ್ರಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಝಹೂರ್ ಅಹ್ಮದ್ ನಾಪತ್ತೆಯಾಗಿರುವ ಯೋಧ. ಅವರು ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ.
ಯೋಧ ಸೇವಾನಿರತ ಬದೂಕು ಸೇರಿದಂತೆ ಮೂರು ಸುತ್ತು ಗುಂಡು(ಮ್ಯಾಗಜಿನ್) ಸಮೇತ ನಾಪತ್ತೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಜಮ್ಮು ಕಾಶ್ಮೀರದ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.