ADVERTISEMENT

ಶಾರದಾ ಚಿಟ್‌ಫಂಡ್‌: ರಾಜೀವ್‌ ಕುಮಾರ್‌ಗೆ ಬಂಧನ ಭೀತಿ

​ಪ್ರಜಾವಾಣಿ ವಾರ್ತೆ
Published 17 ಮೇ 2019, 20:15 IST
Last Updated 17 ಮೇ 2019, 20:15 IST
   

ನವದೆಹಲಿ: ಶಾರದಾ ಚಿಟ್‌ಫಂಡ್‌ ಹಗರಣದಲ್ಲಿ ಕೋಲ್ಕತ್ತಾದ ಮಾಜಿ ಪೊಲೀಸ್‌ ಕಮಿಷನರ್ ರಾಜೀವ್‌ ಕುಮಾರ್‌ ಅವರನ್ನು ಬಂಧಿಸದಂತೆ ನೀಡಲಾಗಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತೆರವುಗೊಳಿಸಿದೆ.

ಈ ಪ್ರಕರಣದಲ್ಲಿ ಕಾನೂನು ಪ್ರಕಾರ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸುವಂತೆ ಸಿಜೆಐ ರಂಜನ್ ಗೊಗೋಯಿ ಅವರನ್ನು ಒಳಗೊಂಡ ಪೀಠ ಸಿಬಿಐಗೆ ತಿಳಿಸಿದೆ. ‘ರಾಜೀವ್‌ ಅವರನ್ನು ಬಂಧಿಸಬಾರದು ಎಂದು ಫೆ.5 ರಂದು ನೀಡಿದ್ದ ಆದೇಶ ತೆರವುಗೊಳಿಸುತ್ತಿರುವುದಾಗಿ’ ಸುಪ್ರೀಂ ಕೋರ್ಟ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT