ADVERTISEMENT

ಶಿಕ್ಷಕರ ಕಿರುಕುಳ ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2017, 18:45 IST
Last Updated 23 ಅಕ್ಟೋಬರ್ 2017, 18:45 IST

ತಿರುವನಂತಪುರ: ಶಿಕ್ಷಕರ ಕಿರುಕುಳದಿಂದ ನೊಂದು ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಗೌರಿ ಎಂಬ ವಿದ್ಯಾರ್ಥಿನಿ, ಚಿಕಿತ್ಸೆ ಫಲಕಾರಿಯಾಗದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾಳೆ.

ಕೊಲ್ಲಂನ ಟ್ರಿನಿಟಿ ಲೈಸಿಎಂ ಶಾಲೆಯ 10ನೇ ತರಗತಿ ಓದುತ್ತಿದ್ದ ಗೌರಿ ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ್ದಳು.

ಇದೇ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಗೌರಿಯ ಸಹೋದರಿ ತರಗತಿ ನಡೆಯುವ ವೇಳೆ ಸಹಪಾಠಿಗಳೊಂದಿಗೆ ಮಾತನಾಡಿದ್ದಕ್ಕೆ, ಶಿಕ್ಷಕರೊಬ್ಬರು ಆಕೆಯನ್ನು ಬಾಲಕರೊಂದಿಗೆ ಕೂರಿಸಿ ಶಿಸ್ತಿನ ಕ್ರಮ ಜರುಗಿಸಿದ್ದರು. ಇದರಿಂದಾಗಿ ಕೆಲವು ಸಹಪಾಠಿಗಳು ಆಕೆಯನ್ನು ಗೇಲಿ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.