ADVERTISEMENT

ಶಿವಕುಮಾರ ಸ್ವಾಮೀಜಿ ನಿಧನ

​ಪ್ರಜಾವಾಣಿ ವಾರ್ತೆ
Published 15 ಜನವರಿ 2012, 19:30 IST
Last Updated 15 ಜನವರಿ 2012, 19:30 IST

ಕನಕಪುರ: ತಾಲ್ಲೂ ಕಿನ ಚಿಕ್ಕ ಕಲ್ಬಾಳ್‌ನಲ್ಲಿರುವ ಬಾಳೆ ಹೊನ್ನೂರು ರಂಭಾ ಪುರಿ ಪೀಠದ ಶಾಖಾ ಮಠದ ಪೀಠಾಧ್ಯಕ್ಷ ಶಿವ ಕುಮಾರ ಸ್ವಾಮೀಜಿ(82) ಅವರು ಭಾನುವಾರ ಬೆಳಿಗ್ಗೆ ಲಿಂಗೈಕ್ಯ ರಾದರು.

+ ಹೃದ್ರೋಗದಿಂದ ಬಳಲುತ್ತಿದ್ದ ಶ್ರೀಗ ಳನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿ ಸಲಾಗಿತ್ತು. ಒಂದು ವಾರದಿಂದ ಆಸ್ಪತ್ರೆ ಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.

ಶ್ರೀಗಳ ಲಿಂಗೈಕ್ಯದ ಸುದ್ದಿ ಜಿಲ್ಲೆಯಾದ್ಯಂತ ಹರಡುತ್ತಿದ್ದಂತೆ ದೇಗುಲಮಠದ  ಮುಮ್ಮಡಿ ನಿರ್ವಾಣ ಮಹಾಸ್ವಾಮಿ, ಬಿಲ್ವಪತ್ರೆ ಮಠದ ಶಿವಲಿಂಗಸ್ವಾಮಿ, ಕೆಂಗೇರಿ ಬಂಡೇ ಮಠದ ಶಿವಲಿಂಗಸ್ವಾಮಿ, ಮರಳವಾಡಿ ಮೃತ್ಯುಂಜಯ ಸ್ವಾಮಿ, ಬೇಲಿಮಠದ ಶಿವರುದ್ರಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಹರ-ಗುರು ಶರಣರು ಹಾಗೂ ರಾಜಕೀಯ ಮುಖಂಡರು ಮಠಕ್ಕೆ ಆಗಮಿಸಿ, ಸ್ವಾಮೀಜಿ ದರ್ಶನ ಪಡೆದರು.

ಅಂತ್ಯಕ್ರಿಯೆಯು ಸೋಮವಾರ ಬೆಳಿಗ್ಗೆ 10 ಗಂಟೆಗೆ ಮಠದ ಆವರಣದಲ್ಲಿ ನೆರವೇರಲಿದೆ ಎಂದು ಮಠದ ಕಿರಿಯ ಶ್ರೀಗಳಾದ ಶಿವಾನಂದ ಶಿವಾಚಾರ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.