ಮುಂಬೈ(ಪಿಟಿಐ): ಬಿಜೆಪಿ ಜತೆಗಿನ ಬಹುಕಾಲದ ಮೈತ್ರಿಯನ್ನು ಕಡಿದುಕೊಂಡ ಶಿವಸೇನಾ ಇದೀಗ ಮಹಾರಾಷ್ಟ್ರ ಸರ್ಕಾರದ ನಿರ್ಧಾರವೊಂದನ್ನು ಸ್ವಾಗತಿಸಿದೆ.
ಇಲ್ಲಿನ ಸಮುದ್ರ ತೀರದಲ್ಲಿ ಛತ್ರಪತಿ ಶಿವಾಜಿ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಒಪ್ಪಿಗೆ ಪಡೆಯಲು ಮುಂದಾಗಿರುವ ಬಿಜೆಪಿ ನೇತೃತ್ವದ ಸರ್ಕಾರದ ಕ್ರಮವನ್ನು ಶಿವಸೇನಾ ಸ್ವಾಗತಿಸಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆಯದಿದ್ದರೂ ರಾಜ್ಯದ ಹಿತದೃಷ್ಟಿಯಿಂದ ದೃಢ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ‘ಸಾಮ್ನಾ’ ಸಂಪಾದಕೀಯದಲ್ಲಿ ಹೇಳಿದೆ.
ಶಿವಾಜಿ ಮಹಾರಾಜ್ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಅಗತ್ಯ ಕ್ರಮಗಳನ್ನು ಕೈಗೊಂಡರೆ ಇದರ ಕಾಮಗಾರಿ ಕೂಡಲೇ ಮುಗಿಯುತ್ತದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ಇಚ್ಛಾಶಕ್ತಿಯನ್ನು ಮೆಚ್ಚುವುದಾಗಿ ಹೇಳಿದೆ.
ಇದೇ 20 ರಂದು ಮುಖ್ಯಮಂತ್ರಿ ಶಿವಾಜಿ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ ದ್ದರು.
ಶಿವಾಜಿ ಮಹಾರಾಜರ ಹೆಸರನ್ನು ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಬಳ ಸಿತ್ತು. ಮತದಾರರೂ ಸಹ ಬಹುಮತ ಪಡೆಯುವಷ್ಟು ಮತ ನೀಡಿದ್ದರು. ಆದರೆ ಸ್ಪಷ್ಟ ಬಹುಮತ ಪಡೆಯಲಿಲ್ಲ. ಆದರೂ ಸರ್ಕಾರ ಸರ್ಕಾರವೇ. ಆದರೂ ಸರ್ಕಾರ ರಾಜ್ಯದ ಹಿತದೃಷ್ಟಿಯಲ್ಲಿ ಒಳ್ಳೆಯ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಹೇಳಿದೆ.
ರಾಜ್ಯದಲ್ಲಿನ ಹಲವಾರು ಅಭಿವೃದ್ಧಿ ಯೋಜನೆಗಳು ಪರಿಸರ ಅನುಮತಿ ದೊರೆಯದ ಕಾರಣ ನಿಂತಿವೆ. ಒಂದು ವೇಳೆ ಪರಿಸರ ಇಲಾಕೆ ಒಳ್ಳೆಯ ತೀರ್ಮಾನಗಳನ್ನು ಕೈಗೊಂಡರೆ ರಾಜ್ಯದ ಅಭಿವೃದ್ಧಿ ಕಾಮಗಾರಿಗಳು ಆರಂಭವಾ ಗುತ್ತವೆ ಎಂದು ಸಂಪಾದಕೀಯ ವಿವರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.