ನವದೆಹಲಿ(ಐಎಎನ್ಎಸ್): ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಕೇರಳದ ನೂತನ ರಾಜ್ಯಪಾಲರಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೇರಳ ರಾಜಧಾನಿ ತಿರುವನಂತಪುರಕ್ಕೆ ಕುಟುಂಬ ಸದಸ್ಯರು ಹಾಗೂ ತಮ್ಮ ಸಂಪುಟದಲ್ಲಿದ್ದ ಆಪ್ತರ ಜತೆ ಸೋಮವಾರ ಶೀಲಾ ತೆರಳಲಿದ್ದಾರೆ.
2013 ರ ಮಾರ್ಚ್ನಿಂದ ಕೇರಳ ರಾಜ್ಯಪಾಲರಾಗಿ ದೆಹಲಿ ಮಾಜಿ ಪೊಲೀಸ್ ಅಧಿಕಾರಿ ನಿಖಿಲ್ ಕುಮಾರ್್ ಕಾರ್ಯನಿರ್ವಹಿಸುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.