ADVERTISEMENT

ಶುಕ್ಲಾಗೆ ಅಂತಿಮ ನಮನ

​ಪ್ರಜಾವಾಣಿ ವಾರ್ತೆ
Published 12 ಜೂನ್ 2013, 19:59 IST
Last Updated 12 ಜೂನ್ 2013, 19:59 IST

ರಾಯಪುರ (ಐಎಎನ್‌ಎಸ್): ಕೇಂದ್ರದ ಮಾಜಿ ಸಚಿವ ವಿ.ಸಿ.ಶುಕ್ಲಾ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಫಾರ್ಮ್‌ಹೌಸ್‌ನಲ್ಲಿ ಬುಧವಾರ ನಡೆಯಿತು. ಛತ್ತೀಸಗಡದಲ್ಲಿ ಕಳೆದ ತಿಂಗಳ ನಕ್ಸಲರು ನಡೆಸಿದ ದಾಳಿಯಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಶುಕ್ಲಾ ಮಂಗಳವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ಶುಕ್ಲಾ ಅವರ ಬಯಕೆಯಂತೆ ರಾಧೆಶ್ಯಾಂ ಭವನದ ಫಾರ್ಮ್‌ಹೌಸ್‌ನಲ್ಲೇ  ಅಂತ್ಯಕ್ರಿಯೆ ನಡೆಸಲಾಯಿತು. ಅವರ ಮೊಮ್ಮಗ ವಿನಾಯಕ ಪಾಂಡೆ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಗೃಹಖಾತೆ ರಾಜ್ಯ ಸಚಿವ ಆರ್.ಪಿ.ಎನ್.ಸಿಂಗ್, ಕಾಂಗ್ರೆಸ್ ಮುಖಂಡ ಮೋತಿಲಾಲ್ ವೋರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿಗ್ವಿಜಯ್ ಸಿಂಗ್, ಬಿ.ಕೆ.ಹರಿಪ್ರಸಾದ್‌ಛತ್ತೀಸಗಡದ ರಾಜ್ಯಪಾಲ ಶೇಖರ್ ದತ್, ಮುಖ್ಯಮಂತ್ರಿ ರಮಣ್ ಸಿಂಗ್ ಅಲ್ಲದೆ ಹಲವು ಬಿಜೆಪಿ ಮುಖಂಡರೂ ಸಹ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಶುಕ್ಲಾ ಅವರ ಶವ ಇರಿಸಲಾಗಿದ್ದ ಗಾಂಧಿಭವನದಲ್ಲಿ ಬೆಳಿಗ್ಗೆಯಿಂದಲೇ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರು ಅಗಮಿಸಿ ಅಂತಿಮ ನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.