ADVERTISEMENT

ಶ್ರೀನಗರ: ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್‌ ಯೋಧ ಸಾವು, ಹೊಣೆ ಹೊತ್ತ ಎಲ್‌ಇಟಿ

ಏಜೆನ್ಸೀಸ್
Published 3 ಏಪ್ರಿಲ್ 2017, 16:53 IST
Last Updated 3 ಏಪ್ರಿಲ್ 2017, 16:53 IST
ಶ್ರೀನಗರ: ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್‌ ಯೋಧ ಸಾವು, ಹೊಣೆ ಹೊತ್ತ ಎಲ್‌ಇಟಿ
ಶ್ರೀನಗರ: ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್‌ ಯೋಧ ಸಾವು, ಹೊಣೆ ಹೊತ್ತ ಎಲ್‌ಇಟಿ   

ಶ್ರೀನಗರ: ಭದ್ರತಾಪಡೆ ಸಿಬ್ಬಂದಿ ಇದ್ದ ವಾಹನದ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್‌ಪಿಎಫ್‌ನ ಒಬ್ಬ ಯೋಧ ಸಾವಿಗೀಡಾಗಿದ್ದು, ಹತ್ತು ವರ್ಷದ ಬಾಲಕಿ ಹಾಗೂ ಇಬ್ಬರು ನಾಗರಿಕರು ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಲಷ್ಕರ್‌–ಎ–ತಯಬಾ (ಎಲ್‌ಇಟಿ) ಸಂಘಟನೆ ದಾಳಿಯ ಹೊಣೆ ಹೊತ್ತಿದೆ.

ಸಿಆರ್‌ಪಿಎಫ್‌ನ ಕಾವಲುಪಡೆಯ ವಾಹನದ ಮೇಲೆ ನಡೆದ ಗುಂಡಿನ ದಾಳಿಯನ್ನು ತಾನು ನಡೆಸಿದ್ದಾಗಿ ಲಷ್ಕರ್‌–ಎ–ತಯಬಾ (ಎಲ್‌ಇಟಿ)  ಸಂಘಟನೆ ಹೊಣೆ ಹೊತ್ತುಕೊಂಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಕಾಶ್ಮೀರದಲ್ಲಿ ಭದ್ರತಾಪಡೆಗಳ ಮೇಲೆ ಲಷ್ಕರ್‌ ಉಗ್ರರು ದಾಳಿಯನ್ನು ತೀವ್ರಗೊಳಿಸುವುದಾಗಿ ಹೇಳಿರುವ ಲಷ್ಕರ್‌ನ ವಕ್ತಾರ ಅಬ್ದುಲ್ಲಾ ಗಜ್ನಾವಿ, ಈ ದಾಳಿ ನಡೆಸಿದ ಅಬು ಮೊಸಾ ಕೃತ್ಯವನ್ನು ಪ್ರಶಂಸಿಸಿದ್ದಾನೆ. ಜತೆಗೆ, ಆತನ್ನು ಸನ್ಮಾನಿಸುವುದಾಗಿ ಹೇಳಿ ಇಂಡಿಯಾ ಟುಡೆಗೆ ಮೇಲ್‌ ಕಳುಹಿಸಿದ್ದಾನೆ.

ADVERTISEMENT

ಇಲ್ಲಿನ ಪಂಥಚೌಕದಲ್ಲಿ ಮಧ್ಯಾಹ್ನ 97 ಬೆಟಾಲಿಯನ್‌ನ ಸಿಆರ್‌ಪಿಎಫ್‌ ಯೋಧರು ತೆರಳುತ್ತಿದ್ದ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ‍ಪೊಲೀಸರು ತಿಳಿಸಿದ್ದಾರೆ.

ಸಿಆರ್‌ಪಿಎಫ್‌ನ ಕಾನ್‌ಸ್ಟೆಬಲ್‌ ಬಸಪ್ಪ ಅವರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ವಾಗಿದೆ ಎಂದು ವರದಿಯಾಗಿದೆ.

ವಾಹನ ಚಾಲಕನೂ ಗಾಯಗೊಂಡಿದ್ದಾರೆ. ಸಿಆರ್‌ಪಿಎಫ್‌ನ ಯೋಧರು ಏ. 9ರಂದು ನಡೆಯುವ ಲೋಕಸಭೆ ಉಪ ಚುನಾವಣೆ ಕಾರ್ಯಕ್ಕೆ ಬಸ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದಾಳಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.