ಬೆಂಗಳೂರು: ದ್ವಿಚಕ್ರವಾಹನದಲ್ಲಿ 5 ಸದಸ್ಯರ ಕುಟುಂಬವೊಂದು ಸವಾರಿ ಮಾಡುತ್ತಿದ್ದುದನ್ನು ನೋಡಿ ಪೊಲೀಸ್ ಅಧಿಕಾರಿಯೊಬ್ಬರು ಕೈ ಮುಗಿದು ನಿಂತಿರುವ ಫೋಟೊವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಅಭಿಷೇಕ್ ಗೋಯಲ್ ಅವರು ಆ ಫೋಟೊವನ್ನು ಟ್ವೀಟ್ ಮಾಡಿದ್ದರು. ಇದೀಗ ಅದೇ ರೀತಿಯ ಮತ್ತೊಂದು ಫೋಟೊವನ್ನು ಆಂಗ್ಲ ಭಾಷೆಯ ಚುಟುಕು ಕವನ ಸಹಿತ ಟ್ವೀಟ್ ಮಾಡುವ ಮೂಲಕ ಅವರು ರಸ್ತೆ ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಗಮನ ಸೆಳೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.