ನವದೆಹಲಿ (ಐಎಎನ್ಎಸ್): ಹನ್ನೆರಡು ವರ್ಷಗಳ ಹಿಂದೆ (2001ರ ಡಿ.13) ಸಂಸತ್ ಮೇಲೆ ಉಗ್ರರು ನಡೆಸಿದ ದಾಳಿಗೆ ಬಲಿಯಾದವರಿಗೆ ಶುಕ್ರವಾರ ಸಂಸತ್ ಶ್ರದ್ಧಾಂಜಲಿ ಸಲ್ಲಿಸಿತು. ಶಸ್ತ್ರಸಜ್ಜಿತ ಪಾಕ್ ಉಗ್ರರು ಸಂಸತ್ ಭವನದ ಮೇಲೆ ದಾಳಿ ನಡೆಸಿದಾಗ 9 ಜನ ಮೃತಪಟ್ಟಿದ್ದರು.
ಪ್ರಧಾನಿ ಡಾ. ಮನಮೋಹನ್ ಸಿಂಗ್, ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ, ಲೋಕಸಭೆ ಸ್ಪೀಕರ್ ಮೀರಾ ಕುಮಾರ್, ಸೋನಿಯಾ ಗಾಂಧಿ, ಮತ್ತಿತರ ನಾಯಕರು ಹುತಾತ್ಮರಿಗೆ ನಮನ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.