ADVERTISEMENT

ಸಚಿವ ಸಂಪುಟ ವಿಸ್ತರಣೆ: ಬಿಜೆಪಿ ಟೀಕೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2011, 18:30 IST
Last Updated 19 ಜನವರಿ 2011, 18:30 IST

ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕೆಚ್ಚನ್ನು ತೋರದ  ಸಂಪುಟ ವಿಸ್ತರಣೆ ಒಂದು ವಿಫಲ ಪ್ರಯತ್ನ ಎಂದು ಬಿಜೆಪಿ ಟೀಕಿಸಿದೆ.‘ಈಗ ವಿಸ್ತರಣೆಯಾಗಿರುವ ಸಚಿವ ಸಂಪುಟದ ಪ್ರಯತ್ನವನ್ನು ನೋಡಿದರೆ ಪ್ರಧಾನಿ ಅವರು ತಮ್ಮ ಮೇಲಿರುವ ಒತ್ತಡದಿಂದ ನಿವೃತ್ತರಾದಂತೆ ತೋರುವುದಿಲ್ಲ’ ಎಂದು ಬಿಜೆಪಿ ವಕ್ತಾರ ಶಾನವಾಜ್ ಹುಸೇನ್ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದರಿಂದ ಸರ್ಕಾರ ಯಾವುದೇ ರಾಜಕೀಯ ಸಂದೇಶವನ್ನು ನೀಡಿಲ್ಲ ಎಂದು ಆಪಾದಿಸಿದ ಅವರು, ಭ್ರಷ್ಟಾಚಾರದ ಆಪಾದನೆ ಹೊತ್ತಿರುವ ಕೆಲವು ಸಚಿವರ ಖಾತೆಯನ್ನಷ್ಟೆ ಪ್ರಧಾನಿಯವರು ಬದಲಾಯಿಸಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.